ಪಂಜ: ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಪ್ರಯುಕ್ತ ಗಣಪತಿ ಹವನ ಹಾಗೂ ಕೊರಳು ಕಟ್ಟುವ ಹಬ್ಬ ಸೆ. 7ರಂದು ನಡೆಯಲಿದೆ.
ಪೂರ್ವಾಹ್ನ ಗಂಟೆ 7-00ಕ್ಕೆ ಜೇಸಿ ‘ಕದಿರು’ ಗದ್ದೆಯಿಂದ ಪೂಜೆ ಮಾಡಿ ದೇವಸ್ಥಾನಕ್ಕೆ ಕದಿರು ತರುವುದು, ಪೂರ್ವಾಹ್ನ ಗಂಟೆ 8-30ರಿಂದ ಸಾರ್ವಜನಿಕರಿಗೆ ಕದಿರು ವಿತರಣೆ ಹಾಗೂ ಸಾಮೂಹಿಕ ಅಪ್ಪಕಜ್ಜಾಯ ಸೇವೆ ನಡೆಯಲಿದೆ ಎಂದು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ| ದೇವಿಪ್ರಸಾದ್ ಕಾನತ್ತೂರ್ ಮತ್ತು ಸರ್ವಸದಸ್ಯರು ತಿಳಿಸಿದ್ದಾರೆ.