ಸುಳ್ಯ: ಇಲ್ಲಿನ ಬೀರಮಂಗಲ ನಿವಾಸಿ, ಸುಳ್ಯ ಸರಕಾರಿ ಪದವಿ ಕಾಲೇಜಿನಲ್ಲಿ ಹಿಂದೆ ಪ್ರಾಂಶುಪಾಲರಾಗಿದ್ದು, ಈಗ ಬಂಟ್ವಾಳದ ಕಾಮಾಜೆ ಸರಕಾರಿ ಪದವಿ ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ಡಾ.ಅಚ್ಚುತ ಪೂಜಾರಿಯವರ ಪತ್ನಿ ಮಾಡಾವು ಜ್ಯೂನಿಯರ್ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿರುವ ಸುನಂದರವರು ಸೆ.11ರ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.
ಸುನಂದ ಅವರು ಕೆಲದಿನಗಳ ಹಿಂದೆ ಬೈಕ್ ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಆದರೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆಂದು ತಿಳಿದುಬಂದಿದೆ.
ತಮ್ಮ ಕುಟುಂಬದ ತರವಾಡು ಮನೆ, ಈಶ್ವರಮಂಗಲದ ಮೇನಾಲಕ್ಕೆ ನಿಕಟ ಸಂಬಂಧಿಕರೊಬ್ಬರ ಬೈಕಲ್ಲಿ ಹೋಗುತ್ತಿರುವಾಗ ಮಳೆ ಬಂದ ಕಾರಣಕ್ಕಾಗಿ ಕೊಡೆ ಬಿಡಿಸಿದರೆಂದೂ, ಗಾಳಿಗೆ ಕೊಡೆ ಎಳೆಯಲ್ಪಟ್ಟು ಇವರು ಬೈಕ್ ನಿಂದ ಜಾರಿ ರಸ್ತೆಗೆ ಬಿದ್ದು ತಲೆಗೆ ತೀವ್ರ ಏಟಾಗಿತ್ತು.
ಇದರಿಂದ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿ ಶಸ್ತ್ರಚಿಕಿತ್ಸೆ ನಡೆಸಿದರೂ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರೆಂದೂ ತಿಳಿದುಬಂದಿದೆ.