ಸುಳ್ಯ: ಇಲ್ಲಿನ ಸರಕಾರಿ ಆಸ್ಪತ್ರೆ ಬಳಿಯಿಂದ ಪೊಲೀಸರ ಕೈಯಿಂದ ತಪ್ಪಿಸಿ ಪರಾರಿಯಾಗಿದ್ದ ಕಳ್ಳನನ್ನು ಸುಳ್ಯ ಪೊಲೀಸರು ಹಿಡಿದು ತರುವಲ್ಲಿ ಯಶಸ್ವಿಯಾಗಿದ್ದಾರೆ.
ಸಂಪಾಜೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಕೆಲದಿನಗಳ ಹಿಂದೆ ಪೊಲೀಸರು ತಮಿಳುನಾಡಿನಿಂದ ಬಂಧಿಸಿ ತಂದಿದ್ದರು. ಆತನ ಆರೋಗ್ಯ ತಪಾಸಣೆಗೆಂದು ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಕರೆತಂದ ವೇಳೆ ಅಂದು ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿ ತಮಿಳುನಾಡು ಕಡೆಗೆ ಹೋಗಿದ್ದ ಎಂಬ ಸಂಶಯ ವ್ಯಕ್ತವಾಗಿತ್ತು.
ಇದೀಗ ಪೊಲೀಸರು ಆತನನ್ನು ತಮಿಳುನಾಡಿನ ಸತ್ಯಮಂಗಲ ಪರಿಸರದಲ್ಲಿ ವಶಕ್ಕೆ ಪಡೆದು ಸುಳ್ಯಕ್ಕೆ ಕರೆ ತಂದಿದ್ದಾರೆ ಎಂದು ತಿಳಿದುಬಂದಿದೆ.