ಆಲೆಟ್ಟಿ: ಎಲ್ ಎಲ್ ಬಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಆಲೆಟ್ಟಿ: ಗ್ರಾಮದ ಕಲ್ಲೆಂಬಿ ಎಂಬಲ್ಲಿ ವಿದ್ಯಾರ್ಥಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ(ನ.7) ಸಂಜೆ ವರದಿಯಾಗಿದೆ. ಮೃತನನ್ನು ಕಲ್ಲೆಂಬಿ ಸ್ಥಾನದ ಮನೆಯ ರಾಘವ ಬೆಳ್ಚಪ್ಪಾಡ ಎಂಬವರ ಪುತ್ರ ಮಿಥುನ್ ರಾಜ್( 26) ಎಂದು ಗುರುತಿಸಲಾಗಿದೆ.

ಈತ ಮನೆಯಲ್ಲಿ ಯಾರೂ ಇಲ್ಲದೆ ಸಂದರ್ಭದಲ್ಲಿ ಅಡುಗೆ ಕೋಣೆಯ ಪಕ್ಕಾಸಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಮನೆಯವರು ಸುಳ್ಯಕ್ಕೆ ಮದುವೆಗೆಂದು ಬಂದಿರುವ ಸಂದರ್ಭದಲ್ಲಿ ಕೃತ್ಯವೆಸಗಿಕೊಂಡಿದ್ದು ಮನೆಯವರು ಹಿಂತಿರುಗಿ ಬಂದು ನೋಡಿದ ಮೇಲೆ ವಿಷಯ ತಿಳಿಯಿತು.

ಸ್ಥಳಕ್ಕೆ ಸುಳ್ಯ ಪೋಲಿಸರು ಆಗಮಿಸಿ ಮಹಜರು ನಡೆಸಿ ಸರಕಾರಿ ಆಸ್ಪತ್ರೆಗೆ ಶವವನ್ನು ಮರಣೋತ್ತರ ಪರೀಕ್ಷೆಗೆಂದು ಕರೆ ತರಲಾಗಿದೆ.
ಮೃತ ಪಟ್ಟ ಯುವಕ ಸುಳ್ಯದ ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಯಾಗಿದ್ದು ತಾಯಿ ಪ್ರಸನ್ನ ಕುಮಾರಿ, ಸಹೋದರ ಪ್ರಜೀತ್, ಸಹೋದರಿ ಮಾಯಶ್ರೀ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.