ಮಂಡೆಕೋಲು: ಅರೆಭಾಷೆ ಗಡಿನಾಡ ಉತ್ಸವ| ಭಾಷೆಯ ಬೆಳವಣಿಗೆಗೆ‌ ಉತ್ಸವ ಸಹಕಾರಿ‌-ಸದಾನಂದ ಮಾವಜಿ

ಮಂಡೆಕೋಲು: ಅರೆಭಾಷಿಗರು ಇರುವ ಗಡಿಪ್ರದೇಶಗಳಲ್ಲಿ ಅರೆಭಾಷೆಯನ್ನು ಪ್ರೋತ್ಸಾಹಿಸಲು ಅರೆಭಾಷೆ ಗಡಿನಾಡ ಉತ್ಸವಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಹೇಳಿದರು.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನೇತೃತ್ವದಲ್ಲಿ ಮಂಡೆಕೋಲು ಗ್ರಾಮ ಗೌಡ ಸಮಿತಿ ಸಹಕಾರದಲ್ಲಿ ಭಾನುವಾರ ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ‘ಅಮೃತ ಸಭಾಭವನದಲ್ಲಿ’ ನಡೆದ ಅರೆಭಾಷೆ ಗಡಿನಾಡ ಉತ್ಸವದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗೌಡರ ಯುವ ಸೇವಾ ಸಂಘದ ಪೂರ್ವಾಧ್ಯಕ್ಷ ಜಾಕೆ ಸದಾನಂದ ಗೌಡ ಕಾರ್ಯಕ್ರಮ ಉದ್ಘಾಟಿಸಿದರು. ಮಂಡೆಕೋಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಶಲ ಉದ್ದಂತಡ್ಕ, ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಾಮಕೃಷ್ಣ ರೈ, ಮಂಡೆಕೋಲು ಯಾದವ ಚಾರಿಟಬರ್ ಟ್ರಸ್ಟ್‌ ಅಧ್ಯಕ್ಷ ರಾಮಚಂದ್ರ ಮಾಸ್ಟರ್ ಕೇನಾಜೆ, ತಾಲ್ಲೂಕು ಗೌಡ ಮಹಿಳಾ ಘಟಕದ ಅಧ್ಯಕ್ಷೆ ವಿನುತಾ ಪಾತಿಕಲ್ಲು, ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉದಯ ಕುಮಾರ್ ಜಿ., ಮಂಡೆಕೋಲು ಗ್ರಾಮ ಗೌಡ ಸಮಿತಿ ಉಸ್ತುವಾರಿ ನಿರ್ದೇಶಕರಾದ ಎಂ.ಎಚ್.ಸುರೇಶ್, ಶಿವಪ್ರಸಾದ್ ಉಗ್ರಾಣಿಮನೆ, ಕುಶಾಲಪ್ಪ ಗೌಡ ಕುಕ್ಕೇಟಿ, ಅರೆಭಾಷೆ ಅಕಾಡೆಮಿ ಸದಸ್ಯರಾದ ಎನ್.ಎ.ಜ್ಞಾನೇಶ್, ಚಂದ್ರಶೇಖರ ಪೇರಾಲು, ಲೋಕೇಶ್ ಊರುಬೈಲು, ಪಿ.ಎಸ್.ಕಾರ್ಯಪ್ಪ ಅಕಾಡೆಮಿಯ ರಿಜಿಸ್ಟ್ರಾರ್ ಚಿನ್ನಸ್ವಾಮಿ ಭಾಗವಹಿಸಿದ್ದರು.