ಬೆಂಗಳೂರು: ಇಲ್ಲಿನ ಅರಮನೆ ಮೈದಾನದಲ್ಲಿ ಇಂದು ನಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮದಲ್ಲಿ ಸುಳ್ಯದ ಹಿರಿಯ ಸಹಕಾರಿ ಧುರೀಣ ಪಿ.ಸಿ ಜಯರಾಮರಿಗೆ ‘ಸಹಕಾರ ರತ್ನ’ ಪ್ರಶಸ್ತಿ ಪ್ರದಾನವಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯರವರು ಪ್ರಶಸ್ತಿ ಪ್ರಧಾನ ಮಾಡಿದರು. ಈ ಸಂದರ್ಭದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್, ಸಹಕಾರ ಮಹಾಮಂಡಲದ ಅದ್ಯಕ್ಷ ಜಿ.ಟಿ ದೇವೇಗೌಡ,ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು. ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷ ದಿನೇಶ್ ಮಡಪ್ಪಾಡಿ, ಸಿಇಒ ಕೆ.ಟಿ ವಿಶ್ವನಾಥ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.