ಉಡುಪಿಯ ಉದ್ಯಾವರದಲ್ಲಿ ಅಪಘಾತ| ಸುಬ್ರಹ್ಮಣ್ಯದ ಯುವಕ ಸಾವು

ಸುಬ್ರಹ್ಮಣ್ಯ: ಉಡುಪಿ ಸಮೀಪದ ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66ರ ಸೇತುವೆಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ನಸುಕಿನ ವೇಳೆ 2:30ರ ಸುಮಾರಿಗೆ ನಡೆದಿದೆ.

ಮೃತರನ್ನು ಸುಬ್ರಹ್ಮಣ್ಯದ ಯುವರಾಜ್ ಎಂದು ಗುರುತಿಸಲಾಗಿದೆ. ಮಂಗಳೂರು ಕಡೆಯಿಂದ ಉಡುಪಿ ಕಡೆ ಬರುತ್ತಿದ್ದ ಬೈಕ್ ಅತಿ ವೇಗ ಹಾಗೂ ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಇದರಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಸವಾರ ಯುವರಾಜ ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಉಚ್ಚಿಲದ ಎಸ್‌ಡಿಪಿಐ ಆಂಬುಲೆನ್ಸ್ ನಲ್ಲಿ ಕೆಎಂ ಸಿರಾಜ್, ಜಲಾಲುದ್ದೀನ್ ಅಜ್ಜರಕಾಡು ಆಸ್ಪತ್ರೆಯ ಶವಗಾರಕ್ಕೆ ರವಾನಿಸಿದರು.