ಪಂಜ: ಇಲ್ಲಿನ ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲದ ನಾಗನಕಟ್ಟೆಗಳಲ್ಲಿ ಆ.9 ರಂದು ದೇಗುಲದ ಸಮೀಪದ ನಾಗನ ಕಟ್ಟೆಯಲ್ಲಿ ನಾಗರ ಪಂಚಮಿಯು ವಿವಿಧ ವೈಧಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಆ ಪ್ರಯುಕ್ತ ಹಣ್ಣುಕಾಯಿ, ಪಂಚಾಮೃತ ಅಭಿಷೇಕ, ನಾಗ ತಂಬಿಲ ಸೇವೆಗಳು ನಡೆಯಿತು . ಅರ್ಚಕ ರಾಮಚಂದ್ರ ಭಟ್ ವೈದಿಕ ಕಾರ್ಯಕ್ರಮ ನೆರವೇರಿಸಿ ಪ್ರಾರ್ಥಿಸಿದರು.
ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ , ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸಂತೋಷ್ ರೈ ಪಲ್ಲತ್ತಡ್ಕ, ಧರ್ಮಪಾಲ ಗೌಡ ಮರಕಡ,ಧರ್ಮಣ್ಣ ನಾಯ್ಕ ಗರಡಿ, ರಾಮಚಂದ್ರ ಭಟ್, ಸತ್ಯನಾರಾಯಣ ಭಟ್ , ಮಾಯಿಲಪ್ಪ ಗೌಡ ಪಟ್ಟೆ ಎಣ್ಮೂರು ,ಕಾಯಂಬಾಡಿ,ಶ್ರೀಮತಿ ಮಾಲಿನಿ ಕುದ್ವ, ಶ್ರೀಮತಿ ಪವಿತ್ರ ಮಲ್ಲೆಟಿ , ಗೌರವ ಸಲಹೆಗಾರರು, ಸೀಮೆಯ ಭಕ್ತರು ಉಪಸ್ಥಿತರಿದ್ದರು.