ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯು ಆ.14 ರಂದು ಮಂಗಳೂರಿನಲ್ಲಿ ನಡೆಯಿತು.

ಈ ಸಭೆಯಲ್ಲಿ ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅವರ ಸೇವೆಯನ್ನು ಪರಿಗಣಿಸಿ ‘ಅತ್ಯುತ್ತಮ ಸಹಕಾರ ಸಂಘ’ ಎಂಬ ಪ್ರಶಸ್ತಿ ದೊರಕಿದೆ.

ಉಬರಡ್ಕ ಮಿತ್ತೂರು ಪ್ರಾ. ಕೃ. ಪ. ಸಹಕಾರ ಸಂಘದ ಅಧ್ಯಕ್ಷ ದಾಮೋದರ ಗೌಡ ಮದುವೆಗದ್ದೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್ ಉರುಂಡೆ ಪ್ರಶಸ್ತಿ ಸ್ವೀಕರಿಸಿದರು. ಡಿಸಿಸಿ ಬ್ಯಾಂಕಿನ ಅಧ್ಯಕ್ಷ ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರಧಾನ ಮಾಡಿದರು.

ಈ ಸಂದರ್ಭದಲ್ಲಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ, ಸಂಘದ ನಿರ್ದೇಶಕರಾದ ಪಿ.ಎಸ್‌.ಗಂಗಾಧರ, ಹರಿಪ್ರಸಾದ್ ಪಾನತ್ತಿಲ, ಸಹಕಾರಿ ಸಂಘದ ಸಿಬ್ಬಂದಿ ಗುರುವ ಹಾಗೂ ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕರಾದ ಎಸ್.ಎನ್. ಮನ್ಮಥ, ಶಶಿಕುಮಾ‌ರ್ ಬಾಲ್ಯೊಟು, ಮತ್ತಿತರರು ಉಪಸ್ಥಿತರಿದ್ದರು.