ಸುಬ್ರಹ್ಮಣ್ಯ: ಕಾರು – ಸ್ಕೂಟರ್ ಡಿಕ್ಕಿ| ಉಪನ್ಯಾಸಕ ಗಂಭೀರ

ಸುಬ್ರಹ್ಮಣ್ಯ: ಉಪ್ಪಿನಂಗಡಿ-‌ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕುಲ್ಕುಂದ ಬಳಿ ಕಾರು-ದ್ವಿಚಕ್ರ ನಡುವೆ ಅಪಘಾತ ಸಂಭವಿಸಿ ಉಪನ್ಯಾಸಕರೊಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಜ.15 ಸಂಜೆ ನಡೆದಿದೆ.

ಈ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಎಸ್.ಎಸ್.ಪಿ.ಯು ಕಾಲೇಜಿನ ಉಪನ್ಯಾಸಕ ಶ್ರೀಧರ ಪುತ್ರನ್ ಗಂಭೀರ ಗಾಯಗೊಂಡು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ,ಸಹ ಸವಾರೆ ಭವ್ಯ ಎಂಬವರು ಸಣ್ಣ ಪ್ರಮಾಣದ ಗಾಯವಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅಪಘಾತದ ರಭಸಕ್ಕೆ ದ್ವಿಚಕ್ರ ವಾಹನ ಇಬ್ಬಾಗವಾಗಿದ್ದು ಕಾರಿನ ಮುಂಭಾಗಕ್ಕೆ ಹಾನಿಯಾಗಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಭದ್ರಾವತಿ ಮೂಲದವರಾಗಿದ್ದು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ದರ್ಶನಕ್ಕೆ ಬರುತ್ತಿದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಸುಬ್ರಹ್ಮಣ್ಯ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿರುವುದಾಗಿ ತಿಳಿದು ಬಂದಿದೆ.