ಗುತ್ತಿಗಾರು. ಮಾ.16: ”ಹಿರಿಯ ವಿದ್ಯಾರ್ಥಿಗಳು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಪೋಷಕರು ಹಾಗೂ ಗ್ರಾಮ ಪಂಚಾಯತ್ ಸಹಕಾರದಿಂದ ಇಂದು ಸರಕಾರಿ ಶಾಲೆಗಳ ಬಲವರ್ಧನೆ ಸಾಧ್ಯವಾಗಿದ್ದು, ಜೊತೆಗೆ ಗುಣಾತ್ಮಕ ಶಿಕ್ಷಣ ನೀಡುವಂತಾಗಿದೆ” ಎಂದು ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ ತಿಳಿಸಿದರು. ಅವರು ಮಾ. 15ರಂದು ಸರಕಾರಿ ಪ್ರೌಢಶಾಲೆ ಎಲಿಮಲೆಯಲ್ಲಿ, ಹಿರಿಯ ವಿದ್ಯಾರ್ಥಿ ಸಂಘ ಮತ್ತು ಗ್ರಾಮ ಪಂಚಾಯತ್ ದೇವಚಳ್ಳ ವತಿಯಿಂದ ನಡೆದ ವಿವಿಧ ಕಾಮಗಾರಿಗಳು ಮತ್ತು ಕೊಡುಗೆಗಳ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು.
ಶಾಲೆಯ RMSA ಕೊಠಡಿಯ ಮೇಲ್ಚಾವಣಿ ಮತ್ತು ನವೀಕರಣಗೊಂಡ ಕಟ್ಟಡವನ್ನು ಗ್ರಾ.ಪಂ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ಮುಖ್ಯ ಶಿಕ್ಷಕರ ಕೊಠಡಿಯ ನೆಲಹಾಸು (ಟೈಲ್ಸ್ ) ಕ್ಷೇತ್ರ ಶಿಕ್ಷಣಾಧಿಕಾರಿಗಳು ಕೃಷ್ಣಪ್ಪ , ಶಿಕ್ಷಕರ ಕೊಠಡಿಯ ನೆಲಹಾಸನ್ನು ಹಿರಿಯ ವಿದ್ಯಾರ್ಥಿ ಹಾಗೂ ಉದ್ಯಮಿ ಲತೀಫ್ ಹರ್ಲಡ್ಕ, ನೂತನ ಬೋರ್ ಪಂಪ್ ನ್ನು ಹಿರಿಯ ವಿದ್ಯಾರ್ಥಿ ಅನಂತ್ ರಾಜ್ ಮಾಯಿಪನ ಮನೆ, ಕಲರ್ ಪ್ರಿಂಟರ್ ನ್ನು ನೆಲ್ಲೂರು ಕೆಮ್ರಾಜೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಶ್ರೀ ವಿಷ್ಣು ಭಟ್ ಮೂಲೆತೋಟ , ಸಭಾಂಗಣದ ಮುಂಭಾಗದ ನೆಲಹಾಸು (ಟೈಲ್ಸ್ )ನ್ನು ಶ್ರೀ ವಿಷ್ಣು ಇಂಡಸ್ಟ್ರಿಸ್ ಎಲಿಮಲೆಯ ಮಾಲಕ ಮೋಹಿತ್ ಹರ್ಲಡ್ಕ ಮತ್ತು ಹರ್ಷಿತ್ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಅಂಬೆಕಲ್ಲು ವಹಿಸಿದ್ದರು. ವೇದಿಕೆಯಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ಧನಂಜಯ ಬಾಳೆತೋಟ, ಶಾಲಾ ಮುಖ್ಯ ಶಿಕ್ಷಕಿ ಸಂಧ್ಯಾ ಕೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಸುಳ್ಯದ ಅಧ್ಯಕ್ಷ ಶ್ರೀಧರ ಗೌಡ ಕೆರೆಮೂಲೆ, ಎಸ್ ಡಿ ಎಂ ಸಿ ಸದಸ್ಯರು, ಹಿರಿಯ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು, ಶಾಲಾ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಸಂಧ್ಯಾ ಕೆ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕಿ ತಿರುಮಲೇಶ್ವರಿ ಯು ಎಸ್ ಧನ್ಯವಾದ ಅರ್ಪಿಸಿದರು. ಶಿಕ್ಷಕರಾದ ಮುರಳೀಧರ ಪುನುಕುಟ್ಟಿ ಕಾರ್ಯಕ್ರಮ ನಿರೂಪಿಸಿದರು.