ಮಡಪ್ಪಾಡಿ: ಕೃಷಿ‌ ಮಾಹಿತಿ ಕಾರ್ಯಾಗಾರ| ‘ಕೃಷಿಯನ್ನು ವೃತ್ತಿಯನ್ನಾಗಿ ಮಾಡಿಕೊಂಡರೆ ಯಶಸ್ಸು’ – ಸುರೇಶ್ಚಂದ್ರ

ಗುತ್ತಿಗಾರು: ಹಳದಿ ರೋಗ ಬಂತೆಂದು ಊರು ಮತ್ತು ಕೃಷಿ ಬಿಡುವ ಬದಲು ಕೃಷಿಯಲ್ಲಿ ವೃತ್ತಿಯನ್ನಾಗಿ ತೊಡಗಿಸಿಕೊಂಡರೆ ಯಶಸ್ಸು ಖಂಡಿತ. ಕೃಷಿ ಭೂಮಿಯ ಮಣ್ಣಿಗೆ ಶಕ್ತಿ ಇದೆ. ಯಾವುದೇ ಕೃಷಿಯನ್ನು ಮಾಡುವ ಮೊದಲು ಅದರ ಬಗ್ಗೆ ಸಾಕಷ್ಟು ತಿಳಿದುಕೊಳ್ಳಬೇಕು. ಬೀಜ ಅಥವಾ ಗಿಡ ಆಯ್ಕೆ ಮಾಡುವಾಗ ಜಗರೂಕವಾಗಿರಬೇಕು ಎಂದು
ಕೃಷಿಕ ಟಿ.ಆರ್.ಸುರೇಶ್ಚಂದ್ರ, ಕಲ್ಮಡ್ಕ ಹೇಳಿದರು.

ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಯುವಕ ಮಂಡಲ ಸಭಾಭವನದಲ್ಲಿ
ಮಾ.20 ರಂದು ನಡೆದ ಕೃಷಿ ಮಾಹಿತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಕೃಷಿಕರಾದ ಯತೀಶ್ ಗೋಳ್ಯಾಡಿ ನೇರವೇರಿಸಿದರು. ಸಹಕಾರಿ ಸಂಘದ ಅಧ್ಯಕ್ಷ ವಿನಯಕುಮಾರ್ ಮುಳುಗಾಡು ಅಧ್ಯಕ್ಷತೆ ವಹಿಸಿದ್ದರು.

ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಹಾಗೂ ಭೂಮಿಯ ಫಲವತ್ತತೆಯ ಸಂವರ್ಧನೆ ಗೋ ನಂದಾಜಲ ತಯಾರಿಯ ಕುರಿತಾಗಿ ಕೃಷಿಕರಾದ ಪ್ರವೀಣ ಸರಳಾಯ, ಉಪಬೆಳೆಯಾಗಿ ಕಾಳುಮೆಣಸು, ಜಾಯಿಕಾಯಿ ಬೆಳೆಯುವ ವಿಧಾನ ಕುರಿತಾಗಿ ಕೃಷಿಕರಾದ ಟಿ.ಆರ್.ಸುರೇಶ್ಚಂದ್ರ, ತೊಟ್ಟೆತ್ತೋಡಿ ಕಲ್ಮಡ್ಕ, ತಾಳೆ ಕೃಷಿ ಮತ್ತು ಅಡಿಕೆ ಜೊತೆ ಉಪಬೆಳೆಯಾಗಿ ಕಾಫಿ ಕೃಷಿ ಬಗ್ಗೆ ಕೃಷಿಕ ನಿತಿನ್ ಪೂಂಬಾಡಿ ಮಾಹಿತಿ ನೀಡಿದರು.‌

ಈ ಸಂದರ್ಭದಲ್ಲಿ ಮಡಪ್ಪಾಡಿ ಗ್ರಾ.ಪಂ.ಅಧ್ಯಕ್ಷೆ ಉಷಾ ಜಯರಾಮ, ಸಹಕಾರಿ ಸಂಘದ ಮಾಜಿ ಅಧ್ಯಕ್ಷರಾದ ಪಿ.ಸಿ.ಜಯರಾಮ್, ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ, ಸಹಕಾರಿ ಸಂಘದ ಉಪಾಧ್ಯಕ್ಷ ಸಚಿನ್ ಬಳ್ಳಡ್ಕ , ಸಂಘದ ನಿರ್ದೇಶಕರು ಹಾಗೂ ಸದಸ್ಯರು ಭಾಗವಹಿಸಿ ಕೃಷಿ‌ ಮಾಹಿತಿ ಪಡೆದುಕೊಂಡರು. ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಶಾಂತ ಪೂಂಬಾಡಿ ಕಾರ್ಯಕ್ರಮ ನಡೆಸಿಕೊಟ್ಟರು.