Subramanya – Sullia Samagra Samachara https://sullia.samagrasamachara.com Samagra Media Network Thu, 23 Apr 2026 03:40:37 +0000 en-US hourly 1 https://wordpress.org/?v=6.9.4 https://sullia.samagrasamachara.com/wp-content/uploads/2024/07/cropped-logo-samagra-32x32.jpg Subramanya – Sullia Samagra Samachara https://sullia.samagrasamachara.com 32 32 235500897 ಸುಬ್ರಹ್ಮಣ್ಯ: ಕೆ.ಎಸ್.ಎಸ್. ಕಾಲೇಜಿನಲ್ಲಿ ಅತಿಥಿ ಉಪನ್ಯಾಸ https://sullia.samagrasamachara.com/2026/04/23/subramanya-kss-college-news-3/ Thu, 23 Apr 2026 03:40:37 +0000 https://sullia.samagrasamachara.com/?p=71910 ಸುಬ್ರಹ್ಮಣ್ಯ: ಇಲ್ಲಿನ‌ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾ ಕೋಶ, ಮಾದಕ ದ್ರವ್ಯ ವಿರೋಧಿ ಘಟಕ, ಮಾದಕ ದ್ರವ್ಯ ವಿರೋಧಿ ಘಟಕ
ಮತ್ತು ಸಮಾಜಶಾಸ್ತ್ರ ವಿಭಾಗ ಜಂಟಿಯಾಗಿ ‘ಆಂಟಿ ರಾಗ್, ಆಂಟಿ ಡ್ರಗ್ ಮತ್ತು ಪೋಕ್ಸೊ’ ಕುರಿತು ಅತಿಥಿ ಉಪನ್ಯಾಸವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಸುಬ್ರಹ್ಮಣ್ಯ ಠಾಣಾ ಉಪನಿರೀಕ್ಷಕ ಆಂಜನೇಯ ರೆಡ್ಡಿ ಅವರು ವಿದ್ಯಾರ್ಥಿಗಳ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಮಾದಕ ವ್ಯಸನ, ರ‍್ಯಾಗ್ಗಿಂಗ್ ಚಟುವಟಿಕೆಗಳು ಮತ್ತು ಪೋಕ್ಸೊ ಕಾಯ್ದೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು ಮತ್ತು ಸಮಾಜದ ಆರೋಗ್ಯವನ್ನು ಕಾಪಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಮುಖ್ಯವಾಗಿದೆ ಎಂದು ಹೇಳಿದರು. ವಿದ್ಯಾರ್ಥಿಗಳು ತಮ್ಮದೇ ಆದ ಉಪಕ್ರಮದಿಂದ ಉತ್ತಮ ಸಮಾಜವನ್ನು ನಿರ್ಮಿಸಲು ಶ್ರಮಿಸಬೇಕು ಎಂದು ಅವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ್ ಪಿ.ಟಿ ವಹಿಸಿದ್ದರು. ಮಾದಕ ದ್ರವ್ಯ ವಿರೋಧಿ ಘಟಕ ಮತ್ತು ರೇಗಿಂಗ್ ವಿರೋಧಿ ಘಟಕಗಳ ಸಂಯೋಜಕರಾದ ಶಿವಪ್ರಸಾದ್ ಎಸ್, ನಮಿತಾ ಎಂ.ಎ ವನಿತಾ ಕೆ.ಎನ್. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಮನೋಹರ್ ಸ್ವಾಗತಿಸಿದರು ಮತ್ತು ತೃತೀಯ ಬಿ.ಕಾಂ.ನ ವಿದ್ಯಾರ್ಥಿ ಪ್ರತಿನಿಧಿ ಜೀವಿತ್ ಧನ್ಯವಾದ ಅರ್ಪಿಸಿದರು. ಪ್ರಥಮ ಬಿ.ಕಾಂ ವಿದ್ಯಾರ್ಥಿನಿ ಅನನ್ಯಾ ಕಾರ್ಯಕ್ರಮ ನಿರೂಪಿಸಿದರು.

]]>
71910
ಚಂದ್ರಗ್ರಹಣ ಹಿನ್ನಲೆ| ಮಾ.02 ಮತ್ತು 3ರಂದು ಕುಕ್ಕೆಯಲ್ಲಿ ದರ್ಶನ, ಸೇವೆ ವ್ಯತ್ಯಯ https://sullia.samagrasamachara.com/2026/02/12/moon-eclips-cause-pooja-seva-delayed-at-kukke/ Thu, 12 Feb 2026 08:19:12 +0000 https://sullia.samagrasamachara.com/?p=71828 ಸುಬ್ರಹ್ಮಣ್ಯ: ಚಂದ್ರಗ್ರಹಣದ ಅಂಗವಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾರ್ಚ್‌ 2 ಮತ್ತು 3ರಂದು ದೇವರ ದರ್ಶನ ಹಾಗೂ ಸೇವೆಗಳಲ್ಲಿ ವ್ಯತ್ಯಯವಾಗಲಿದೆ ಎಂದು ದೇವಳದ ಆಡಳಿತ ತಿಳಿಸಿದೆ.

ಮಾರ್ಚ್‌ 2 ಮತ್ತು 3ರಂದು ಸರ್ಪಸಂಸ್ಕಾರ ಪೂಜೆ ನಡೆಯುವುದಿಲ್ಲ. 3ರಂದು ಯಾವುದೇ ಸೇವೆಗಳು ಇರುವುದಿಲ್ಲ. ಅಂದು ಮಧ್ಯಾಹ್ನದ ಮಹಾಪೂಜೆ ಬೆಳಿಗ್ಗೆ 8ಕ್ಕೆ ನಡೆಯಲಿದೆ. 9 ಗಂಟೆಯ ಬಳಿಕ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಬೆಳಿಗ್ಗೆಯ ಉಪಾಹಾರ 9 ಗಂಟೆವರೆಗೆ ಸಿಗಲಿದೆ. ಮಧ್ಯಾಹ್ನ ಭೋಜನ ವ್ಯವಸ್ಥೆ ಇರುವುದಿಲ್ಲ. ಸಂಜೆ 7ರ ನಂತರ ದೇವರ ಮಹಾಪೂಜೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

]]>
71828
ಕುಕ್ಕೆ ದೇಗುಲಕ್ಕೆ ಎರಡೇ ತಿಂಗಳಲ್ಲಿ 15 ಕೋಟಿ ಆದಾಯ https://sullia.samagrasamachara.com/2026/01/22/kukke-temple-income-increase/ Thu, 22 Jan 2026 03:08:38 +0000 https://sullia.samagrasamachara.com/?p=71787 ಸುಬ್ರಹ್ಮಣ್ಯ: ರಾಜ್ಯದ ‌ಪ್ರಮುಖ ದೇವಾಲಯಗಳಲ್ಲಿ ಒಂದಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕಳೆದ ಎರಡು ತಿಂಗಳಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದು, 15 ಕೋಟಿ ರೂ.ಗೂ ಅಧಿಕ ಆದಾಯ ಬಂದಿದೆ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಳೆದ ನವೆಂಬರ್ ತಿಂಗಳಲ್ಲಿ ವಿವಿಧ ಸೇವೆಗಳಿಂದ 4.56 ಲಕ್ಷ ಹಣ ಬಂದಿದ್ದರೆ, ಹುಂಡಿಯಲ್ಲಿ 1.9 ಕೋಟಿ ರೂ. ಸಂಗ್ರಹವಾಗಿದೆ. ಹಾಗೆ ಅನ್ನದಾನ ನಿಧಿಯಿಂದ 83.57 ಲಕ್ಷ ರೂ. ಆದಾಯ ಹರಿದು ಬಂದಿದೆ.

ಇನ್ನು ಡಿಸೆಂಬರ್ ತಿಂಗಳಲ್ಲಿ ನಾನಾ ಸೇವೆಗಳಿಂದ 5.30 ಲಕ್ಷ ಹಣ ಬಂದಿದ್ದರೆ, ಹುಂಡಿಯಲ್ಲಿ 1.99 ಕೋಟಿ ರೂ. ಸಂಗ್ರಹವಾಗಿದೆ. ಹಾಗೆ ಅನ್ನದಾನ ನಿಧಿಯಿಂದ 1.07 ಕೋಟಿರೂ. ಆದಾಯ ಗಳಿಸಿದೆ.

ಇದನ್ನು ಹೊರತು ಪಡಿಸಿ ವಸತಿ ಗೃಹ, ಇನ್ನಿತರ ಮೂಲಗಳಿಂದ ಸುಮಾರು 15 ಕೋಟಿ ರೂ. ಗೂ ಹೆಚ್ಚು ಆದಾಯ ಸಂಗ್ರಹವಾಗಿದೆ ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಅರವಿಂದ್ ಅಯ್ಯಪ್ಪ ಸುತಗುಂಡಿ ತಿಳಿಸಿದ್ದಾರೆ.

]]>
71787
ಸುಬ್ರಹ್ಮಣ್ಯ: ನೋಟೀಸ್ ನೀಡಿದ ಬೆನ್ನಲ್ಲೇ 2.67 ಕೋಟಿ ತೆರಿಗೆ ಪಾವತಿಸಿದ ಕುಕ್ಕೆ ಆಡಳಿತ ಮಂಡಳಿ https://sullia.samagrasamachara.com/2025/12/23/kukke-subramanya-temple-news/ Tue, 23 Dec 2025 02:55:21 +0000 https://sullia.samagrasamachara.com/?p=71733 ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಿಂದ ಬಾಕಿಯಾಗಿದ್ದ ರೂ. 2 ಕೋಟಿ 67 ಲಕ್ಷ ಆಸ್ತಿ ತೆರಿಗೆಯನ್ನು ಇಂದು ಪಾವತಿಸಲಾಗಿದೆ ಎಂದು ವರದಿಯಾಗಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಸತಿಗೃಹಗಳ ಆಸ್ತಿ ತೆರಿಗೆ ದೀರ್ಘಕಾಲ ಬಾಕಿ ಉಳಿದಿದ್ದ ಹಿನ್ನೆಲೆಯಲ್ಲಿ, ವಸತಿಗೃಹ ಜಪ್ತಿಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯತ್‌ ನೋಟಿಸ್‌ ಜಾರಿ ಮಾಡಿತ್ತು.

ಈ ನೋಟಿಸ್‌ ನೀಡಿದ ಬಳಿಕವೇ ದೇವಸ್ಥಾನ ಆಡಳಿತದಿಂದ ಬಾಕಿ ತೆರಿಗೆ ಮೊತ್ತವನ್ನು ಸಂಪೂರ್ಣವಾಗಿ ಪಾವತಿಸಲಾಗಿದೆ ಎಂದು ತಿಳಿದುಬಂದಿದೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಶ್ಲೇಷ ವಸತಿಗೃಹಕ್ಕೆ ಸಂಬಂಧಿಸಿದಂತೆ ರೂ. 1 ಕೋಟಿ 23 ಲಕ್ಷ ಹಾಗೂ ದೇವಸ್ಥಾನಕ್ಕೆ ಸೇರಿದ ಇತರೆ ಕೆಲವು ಕಟ್ಟಡಗಳ ರೂ. 1 ಕೋಟಿ 44 ಲಕ್ಷ ಆಸ್ತಿ ತೆರಿಗೆ ಬಾಕಿಯನ್ನು ಪಾವತಿಸಲಾಗಿದೆ. ಈ ಮೂಲಕ ಒಟ್ಟು ರೂ. 2 ಕೋಟಿ 67 ಲಕ್ಷ ತೆರಿಗೆ ಮೊತ್ತ ಗ್ರಾಮ ಪಂಚಾಯತ್‌ಗೆ ಸಂದಿದೆ. ಈ ಬೆಳವಣಿಗೆಗೆ ಕಡಬ ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ನವೀನ್ ಭಂಡಾರಿ ಹಾಗೂ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಆಡಳಿತ ಸಂತಸ ವ್ಯಕ್ತಪಡಿಸಿದ್ದು, ಬಾಕಿ ತೆರಿಗೆ ಪಾವತಿಸಿದಕ್ಕಾಗಿ ದೇವಸ್ಥಾನ ಆಡಳಿತಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ 2024-25ನೇ ಸಾಲಿನ ಆದಾಯ ₹155.95 ಕೋಟಿ ಆಗಿತ್ತು. ಈ ಆದಾಯವು 2023-24ನೇ ಸಾಲಿಗೆ ಹೋಲಿಸಿದರೆ 9.94 ಕೋಟಿ ರೂ. ಹೆಚ್ಚಾಗಿದ್ದು, ದೇವಸ್ಥಾನವು ರಾಜ್ಯದ ಶ್ರೀಮಂತ ದೇವಸ್ಥಾನಗಳಲ್ಲಿ ಅಗ್ರಸ್ಥಾನ ಪಡೆದುಕೊಂಡಿತ್ತು. ದೇವಸ್ಥಾನದ ಒಟ್ಟು ಖರ್ಚು 79.82 ಕೋಟಿ ರೂ. ಆಗಿತ್ತು. ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮದಾಯ ದತ್ತಿ ಇಲಾಖೆಯಡಿ ಬರುವ ಈ ದೇಗುಲವು ಕುಕ್ಕೆ ಶ್ರೀ ಸುಬ್ರಹ್ಮಣ್ಯ ನಾಗಾರಾಧನೆಯ ಪ್ರಮುಖ ಕ್ಷೇತ್ರವಾಗಿದ್ದು, ಕರ್ನಾಟಕ ಸೇರಿದಂತೆ ಹೊರ ರಾಜ್ಯಗಳಿಂದಲೂ ನಿತ್ಯ ಸಾವಿರಾರು ಭಕ್ತರು ಬರುತ್ತಾರೆ. ಸರ್ಪ ಸಂಸ್ಕಾರ ಸೇರಿದಂತೆ ವಿವಿಧ ಸೇವೆ ಹಾಗೂ ಇತರ ಮೂಲಗಳಿಂದ ಈ ಆದಾಯ ಬಂದಿದೆ.

]]>
71733
ಸುಬ್ರಹ್ಮಣ್ಯ: ಕೆ. ಎಸ್. ಎಸ್ :ಇಂಟರ್ ಕಾಲೇಜು ಪ್ರೇರಣಾ ಪಿಯು ಫೆಸ್ಟ್ https://sullia.samagrasamachara.com/2025/12/15/news-one-282/ Mon, 15 Dec 2025 13:24:47 +0000 https://sullia.samagrasamachara.com/?p=71721 ಸುಬ್ರಹ್ಮಣ್ಯ: ಇಲ್ಲಿನ ಕುಕ್ಕೆ ಶ್ರೀ ಸುಬ್ರಮಣ್ಯೇಶ್ವರ ಮಹಾವಿದ್ಯಾಲಯದ ವಾಣಿಜ್ಯ ಮತ್ತು ಉದ್ಯಮಾಡಳಿತ ವಿಭಾಗದ ವತಿಯಿಂದ ಆಯೋಜಿಸಲಾದ ಇಂಟರ್ ಕಾಲೇಜು ಮಟ್ಟದ “ಪ್ರೇರಣಾ ಪಿಯು ಫೆಸ್ಟ್” ಅನ್ನು ಡಿಸೆಂಬರ್ ೧೧ ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಸುಬ್ರಮಣ್ಯ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಅಶೋಕ್ ನೆಕ್ರಾಜೆ ನೆರವೇರಿಸಿದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾಕ್ಟರ್ ದಿನೇಶ ಪಿಟಿ ವಹಿಸಿದ್ದರು. ಉದ್ಘಾಟನಾ ಕಾರ್ಯಕ್ರಮದ ವೇದಿಕೆಯಲ್ಲಿ ಐಕ್ಯೂ ಎಸಿ ಸಂಯೋಜಕರೂ ಹಾಗೂ ವಾಣಿಜ್ಯ ಹಾಗೂ ಉದ್ಯಮಾಡಳಿತ ವಿಭಾಗದ ಮುಖ್ಯಸ್ಥರಾದ ಪ್ರೊ. ಲತಾ ಬಿ.ಟಿ, ಫೆಸ್ಟ್ ನ ಸಂಯೊಜಕರಾದ ಶ್ರೀಮತಿ ಮಧುರ ಕೆ, ಶೈಕ್ಷಣಿಕ ಸಲಹೆಗಾರರಾದ ಶ್ರೀ ರಮಾನಾಥ,ಶ್ರೀಮತಿ ಪ್ರಮೀಳಾ ಮತ್ತು ಶ್ರೀಮತಿ ಅಶ್ವಿನಿ ಹಾಗೂ ವಿದ್ಯಾರ್ಥಿ ಸಂಯೋಜರಾದ ಮನ್ವಿತ್,ಆಸ್ಥಿಕ್ ಮತ್ತು ರಕ್ಷಾ ಉಪಸ್ಥಿತರಿದ್ದರು.

ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ರು ಹಾಗೂ ಸದಸ್ಯರು, ಪೂರ್ವ ವಿದ್ಯಾರ್ಥಿ ಸಂಘದ ಸದಸ್ಯರು ಉಪಸ್ಥಿತರಿದ್ದರು. ಫೆಸ್ಟ್‌ನ ಅಂಗವಾಗಿ ಕ್ವಿಜ್ , ಟ್ರೆಶರ್ ಹಂಟ್, ಮಾರ್ಕೆಟಿಂಗ್, ಫೈನಾನ್ಸ್, ಫೇಸ್ ಪೈಂಟಿಂಗ್, ಸಮೂಹ ನೃತ್ಯ ಮತ್ತು ಬೆಸ್ಟ್ ಮ್ಯಾನೇಜರ್ ಎಂಬ ಒಟ್ಟು ಎಂಟು ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, 22 ವಿವಿಧ ಕಾಲೇಜುಗಳಿಂದ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು.

ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ತುಳು ಹಾಗೂ ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಜೆಪಿ ತುಮಿನಾಡ್ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ ಪಿ.ಟಿ ವಹಿಸಿದ್ದರು. ಸಂಯೋಜಕಿ ಮಧುರ ಕೆ ಸ್ವಾಗತಿಸಿ, ವಿದ್ಯಾರ್ಥಿನಿ ಸಂಜನಾ ಕಾರ್ಯಕ್ರಮ ನಿರೂಪಿಸಿದರು. ಸುಬ್ರಹ್ಮಣ್ಯದ
ಕುಮಾರಸ್ವಾಮಿ ಪಿ.ಯು ಕಾಲೇಜು ಚಾಂಪಿಯನ್ ಆಗಿಯು, ಕೆಎಸ್ ಗೌಡ ಕಾಲೇಜು ನಿಂತಿಕಲ್ ಹಾಗೂ ಎಸ್ ಎಸ್ ಪಿ ಯು ಕಾಲೇಜು ದ್ವಿತೀಯ ರನ್ನರ್ ಆಗಿಯೂ ಹೊರಹೊಮ್ಮಿದರು. ಫೆಸ್ಟ್ ಪ್ರಯುಕ್ತ ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿಗಳಾದ ಸಿಎಸ್ ರೇನುಣುಪ್ರಸಾದ್ ಹೊಸಳಿಕೆ ಮತ್ತು ಸಿಎ ಚಕ್ರಪಾಣಿ ಅವರನ್ನು ಸನ್ಮಾನಿಸಲಾಯಿತು.

]]>
71721
ಸುಬ್ರಹ್ಮಣ್ಯ: ಭಕ್ತರ ಜೊತೆ ಆಟವಾಡುತ್ತಿದ್ದಾಗ ಅಡ್ಡ ಬಂದ ಸಿಬ್ಬಂದಿಯನ್ನು ಸೊಂಡಿಲಿನಿಂದ ತಳ್ಳಿದ ಯಶಸ್ವಿನಿ https://sullia.samagrasamachara.com/2025/12/04/news-one-277/ Thu, 04 Dec 2025 07:30:06 +0000 https://sullia.samagrasamachara.com/?p=71693 ಸುಬ್ರಹ್ಮಣ್ಯ : ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ದೇಗುಲದ ಆನೆ ಯಶಸ್ವಿನಿಯು ಸಿಬ್ಬಂದಿಯನ್ನು ಸೊಂಡಿಲಿನಿಂದ ನೀರಿಗೆ ಎಸೆದು ಕೆಲ ಹೊತ್ತು ಆತಂಕ ಸೃಷ್ಟಿಸಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಾರ್ಷಿಕ ಜಾತ್ರಾ ಪ್ರಯುಕ್ತ ಆಯೋಜಿಸಿದ್ದ ನೀರು ಬಂಡಿ ಉತ್ಸವದ ವೇಳೆ ಈ ಘಟನೆ ನಡೆದಿದೆ.

ಭಕ್ತರೊಂದಿಗೆ ಬೆರೆಯುತ್ತ ಆಟವಾಡುತ್ತಿದ್ದ ಯಶಸ್ವಿನಿ ಆನೆ ಇದ್ದಕ್ಕಿದ್ದಂತೆ ಅಸಮಾಧಾನಗೊಂಡಿದ್ದು, ಅಡ್ಡ ಬಂದ ಸಿಬ್ಬಂದಿಯನ್ನು ಸೊಂಡಿಲಿನಿಂದ ಎತ್ತಿ ಬದಿಗೆ ಎಸೆದಿದೆ. ಸದ್ಯ ಈ ಘಟನೆಯ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

ಇನ್ನು ಘಟನೆ ನಡೆದ ಕೆಲ ಕ್ಷಣದಲ್ಲೇ ಯಶಸ್ವಿನಿ ಆನೆ ಶಾಂತವಾಗಿದ್ದು, ಯಾವುದೇ ಸಮಸ್ಯೆ ಎದುರಾಗಿಲ್ಲ. ಮಕ್ಕಳು, ಭಕ್ತರು ಆನೆಗೆ ನೀರೆರಚಿದರೆ, ಆನೆ ಸೊಂಡಿಲಿನಿಂದ ಅವರತ್ತ ನೀರು ಚಿಮುಕಿಸಿದೆ. ಸಿಬ್ಬಂದಿಗೂ ಯಾವುದೇ ಗಾಯವಾಗಿಲ್ಲ.

]]>
71693
ಕುಕ್ಕೆ ಸುಬ್ರಹ್ಮಣ್ಯ: ಇಂದು ರಾತ್ರಿ ಪಂಚಮಿ ರಥೋತ್ಸವ| ನಾಳೆ(ನ.26) ಚಂಪಾಷಷ್ಟಿ ರಥೋತ್ಸವ https://sullia.samagrasamachara.com/2025/11/25/kukke-subramanya-car-festival/ Tue, 25 Nov 2025 09:58:13 +0000 https://sullia.samagrasamachara.com/?p=71678 ಸುಬ್ರಹ್ಮಣ್ಯ: ಚಂಪಾಷಷ್ಟಿ ಮಹೋತ್ಸವದ ಅಂಗವಾಗಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದು ರಾತ್ರಿ ಪಂಚಮಿ ರಥೋತ್ಸವ ನಡೆಯಲಿದೆ. ಬಳಿಕ ಕುಕ್ಕೆ ಬೆಡಿ ನಡೆಯಲಿದೆ.

ಚಂಪಾಷಷ್ಠಿ ಮಹೋತ್ಸವದ ಪ್ರಯುಕ್ತ‌ ನಾಳೆ (ನ.26ರಂದು) ಬ್ರಹ್ಮರಥೋತ್ಸವ ನಡೆಯಲಿದೆ. ನಾಳೆ ಬೆಳಿಗ್ಗೆ 7.29ರ ವೃಶ್ಚಿಕ ಲಗ್ನ ಶುಭ ಮುಹೂರ್ತದಲ್ಲಿ ಚಂಪಾಷಷ್ಠಿ ಬ್ರಹ್ಮರಥೋತ್ಸವ ನಡೆಯಲಿದೆ ಎಂದು ದೇಗುಲದ ಪ್ರಕಟಣೆ ತಿಳಿಸಿದೆ.

]]>
71678
ಕುಕ್ಕೆ ಸುಬ್ರಹ್ಮಣ್ಯ: ಚಂಪಾಷಷ್ಠಿ ಗೆ ಕೃಷಿ ಮೇಳದ ಮೆರುಗು https://sullia.samagrasamachara.com/2025/11/25/kukke-subramanya-agri-fest/ Tue, 25 Nov 2025 06:41:43 +0000 https://sullia.samagrasamachara.com/?p=71675 ಸುಬ್ರಹ್ಮಣ್ಯ: ಕುಕ್ಕೇ ಶ್ರೀ ಸುಬ್ರಹ್ಮಣ್ಯ ಚಂಪಾಷಷ್ಠಿ ಪ್ರಯುಕ್ತ ವಿಶೇಷ ಕೃಷಿ ಮೇಳ ಆಯೋಜಿಸಲಾಗಿದ್ದು ಕೃಷಿ ಮೇಳದಲ್ಲಿ ಕೃಷಿ ಉಪಯೋಗಿ ಸಲಕರಣೆಗಳು , ಸಾವಯುವ ರಸಗೊಬ್ಬರಗಳು ವಿವಿಧ ಜಾತಿಯ ವಿವಿಧ ಹಣ್ಣಿನ ಗಿಡಗಳು ಹಾಗೂ ಇನ್ನಿತರ ತರಕಾರಿ ಬೀಜಗಳ ಮಳಿಗೆಗಳನ್ನು ತೆರೆಯಲಾಗುತ್ತದೆ.

ಸದ್ಯ ಕೃಷಿಗೆ ಬಾಧಿಸುತ್ತಿರುವ ಎಲೆ ಚುಕ್ಕಿ ರೋಗದ ಪರಿಹಾರ ಮಾಹಿತಿಯ ಮಳಿಗೆ ಜೊತೆಗೆ ಕೃಷಿ ,‌ ತೋಟಗಾರಿಗೆ , ಪಶುವೈದ್ಯಕೀಯ ಹಾಗೂ ಇನ್ನಿತರ ಸರಕಾರದ ಮಳಿಗೆಗಳನ್ನು ತೆರೆಯಲಾಗಿದ್ದು ಇದರ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಕೃಷಿಮೇಳ ಸಮಿತಿಯ ಅಧ್ಯಕ್ಷೆ ಲೀಲಾ ಮನಮೋಹನ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

]]>
71675
ಕುಕ್ಕೆ: ಚೌತಿ ದಿನದಂದು 110 ಭಕ್ತರಿಂದ ಎಡೆಸ್ನಾನ https://sullia.samagrasamachara.com/2025/11/25/kukke-subramanya-110-devotees/ Tue, 25 Nov 2025 03:21:07 +0000 https://sullia.samagrasamachara.com/?p=71672 ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ಚಂಪಾ ಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ದೇವಳದ ಹೊರಾಂಗಣದಲ್ಲಿ 110 ಸೇವಾರ್ಥಿಗಳು ಎಡೆಸ್ನಾನ ಉರುಳು ಸೇವೆ ನೆರವೇರಿಸಿದರು.

ಹೊರಾಂಗಣದಲ್ಲಿ ಸುತ್ತಲೂ ಹಾಕಿದ್ದ ಬಾಳೆ ಎಲೆ, ಅದಕ್ಕೆ ಬಡಿಸಿದ್ದ ದೇವರ ನೈವೇದ್ಯವನ್ನು ಗೋವುಗಳಿಂದ ತಿನ್ನಿಸಿ ಬಳಿಕ ಹರಕೆ ಹೊತ್ತವರು ಉರುಳು ಸೇವೆ ನೆರವೇರಿಸಿದರು.

ಅದಕ್ಕೂ ಮೊದಲು ಸೇವೆ ಮಾಡುವ ಭಕ್ತರು ದರ್ಪಣ ತೀರ್ಥದಲ್ಲಿ ಮಿಂದು ಅಲ್ಲಿಂದ ಸರತಿ ಸಾಲಿನಲ್ಲಿ ಬಂದು ಎಡೆ ಸೇವೆ ನೆರವೇರಿಸಿದರು.

]]>
71672
ಸುಬ್ರಹ್ಮಣ್ಯ ರೋಡ್ ರೈಲ್ವೆ ನಿಲ್ದಾಣಕ್ಕೆ ಜಿ.ಎಂ ಭೇಟಿ https://sullia.samagrasamachara.com/2025/11/18/railway-gm-visited-subramanya-road-station/ Tue, 18 Nov 2025 03:18:46 +0000 https://sullia.samagrasamachara.com/?p=71642 ಸುಬ್ರಹ್ಮಣ್ಯ: ನೆಟ್ಟಣದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣಕ್ಕೆ ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಮುಕುಲ್ ಶರಣ್ ಮಾಥುರ್ ಅವರು ಭೇಟಿ ನೀಡಿ ನಿಲ್ದಾಣದ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. ಬಳಿಕ ಬಳಕೆದಾರರ ಅಹವಾಲು ಆಲಿಸಿದರು.

ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಪ್ರಗತಿಯಲ್ಲಿರುವ ಅಮೃತ್ ಭಾರತ್ ನಿಲ್ದಾಣ ಯೋಜನೆಯ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು. ನಿಲ್ದಾಣದಲ್ಲಿ ಪ್ರಯಾಣಿಕ ಸೌಲಭ್ಯಗಳು, ಅಭಿವೃದ್ಧಿ ಕಾರ್ಯಗಳು ಮತ್ತು ಸೇವಾ ಗುಣಮಟ್ಟವನ್ನು ಮತ್ತಷ್ಟು ಸುಧಾರಿಸುವ ನಿಟ್ಟಿನಲ್ಲಿ ವಿವಿಧ ಅಂಶಗಳನ್ನು ಅವಲೋಕಿಸಿದರು. ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮುದಿತ್ ಮಿತ್ತಲ್ ಹಾಗೂ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಬಳಿಕ ಸಕಲೇಶಪುರ ಘಾಟ್ ಸೆಕ್ಷನ್‌ನ ವಿದ್ಯುದ್ದೀಕರಣ ಕಾರ್ಯಗಳನ್ನೂ ಪರಿಶೀಲಿಸಿದರು. ಹೊಸದಾಗಿ ವಿದ್ಯುದೀಕೃತಗೊಳ್ಳುತ್ತಿರುವ ಭಾಗದ ಸಿದ್ಧತೆ ಹಾಗೂ ಭದ್ರತಾ ಮಾನದಂಡಗಳನ್ನು ಪರಿಶೀಲಿಸಿದರು. ಜತೆಗೆ ಸುಬ್ರಹ್ಮಣ್ಯ ರಸ್ತೆ ಮತ್ತು ಹಾಸನ ನಡುವಿನ ವಿಭಾಗದಲ್ಲಿ ವಿಂಡೋ ಟ್ರೈಯಾಂಗಲ್ ಪರಿಶೀಲನೆ ನಡೆಸಲಾಗಿದ್ದು, ರೈಲ್ವೆ ಹಳಿಗಳ ಸ್ಥಿತಿ, ಸಿಗ್ನಲ್ ವ್ಯವಸ್ಥೆಗಳು ಹಾಗೂ ಸುರಕ್ಷತೆ ಮತ್ತು ಸುಗಮ ರೈಲು ಸಂಚಾರಕ್ಕೆ ಅಗತ್ಯವಿರುವ ಇತರೆ ಕಾರ್ಯಾಚರಣೆ ಅಂಶಗಳ ಮೌಲ್ಯಮಾಪನ ಮಾಡಿದರು.

ಮುಕುಲ್ ಸರನ್ ಮಾಥುರ್, ಮುದಿತ್ ಮಿತ್ತಲ್ ಅವರು ಸುಬ್ರಹ್ಮಣ್ಯ ರಸ್ತೆ ನಿಲ್ದಾಣದಲ್ಲಿ ಪ್ರಯಾಣಿಕರೊಂದಿಗೆ ಸಂವಹನ ನಡೆಸಿ, ರೈಲ್ವೆ ಸೌಲಭ್ಯಗಳು, ಸೇವೆಗಳು ಮತ್ತು ಪ್ರಯಾಣ ಅನುಭವದ ಬಗ್ಗೆ ಅಭಿಪ್ರಾಯ ಸಂಗ್ರಹಿಸಿದರು. ಹಿರಿಯ ಅಧಿಕಾರಿಗಳು ಕೂಡ ಭಾಗವಹಿಸಿ ಪ್ರಯಾಣಿಕರಿಂದ ದೊರೆತ ಸಲಹೆಗಳನ್ನು ದಾಖಲಿಸಿಕೊಂಡು ತ್ವರಿತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಕುಕ್ಕೆ ಶ್ರೀ ಸುಬ್ರಹ್ಮಣ್ಯ -ಮಂಗಳೂರು ರೈಲು ಬಳಕೆದಾರರ ಹಿತರಕ್ಷಣಾ ವೇದಿಕೆ ಸಂಚಾಲಕ ಸುದರ್ಶನ್ ಪುತ್ತೂರು, ನೆಟ್ಟಣ ರೈಲು ಬಳಕೆದಾರರ ಸಂಘದ ಅಧ್ಯಕ್ಷ ಪ್ರಸಾದ್ ಕೆ.ಜಿ., ಮತ್ತಿತರರು ಉಪಸ್ಥಿತರಿದ್ದರು.

]]>
71642